Vivek Subba Reddy Supporters

Vivek Subba Reddy Supporters

Share

(Modi Ka Parivar)
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಈ ಬಾರಿ ನಮ್ಮ‌ ವಿವೇಕ್ ಸುಬ್ಬಾರೆಡ್ಡಿಯವರನ್ನು ಬೆಂಬಲಿಸಿ.

15/04/2026

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿ, ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.‌ ಡಿ. ದೇವೇಗೌಡ, ರಾಜ್ಯಪಾಲರಾದ ಶ್ರೀ ಥಾವರ್‌ಚಂದ್‌ ಗೆಹ್ಲೋಟ್‌, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಶ್ರೀ ಹೆಚ್.‌ ಡಿ. ಕುಮಾರಸ್ವಾಮಿ, ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ, ಪ್ರತಿಪಕ್ಷ ನಾಯಕರಾದ ಶ್ರೀ ಆರ್.‌ ಅಶೋಕ್‌ ಮತ್ತು ಪ್ರಮುಖರು ಉಪಸ್ಥಿತರಿದ್ದರು.

27/02/2026

ರೈತ ಪರ ಹೋರಾಟಗಾರರು, ಕಾರ್ಯಕರ್ತರ ಮಾರ್ಗದರ್ಶಕರು, ರಾಜಕೀಯ ಕ್ಷೇತ್ರದಲ್ಲಿ 50 ವಸಂತಗಳನ್ನು ಪೂರೈಸಿದ ಧೀಮಂತ ನಾಯಕರಾದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪನವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.

ವಿವೇಕ್ ಸುಬ್ಬಾರೆಡ್ಡಿ
ಅಧ್ಯಕ್ಷರು - ಬೆಂಗಳೂರು ವಕೀಲರ ಸಂಘ
ಹಿರಿಯ ವಕೀಲರು - ಉಚ್ಚ ನ್ಯಾಯಾಲಯ, ಕರ್ನಾಟಕ

Photos from Vivek S***a Reddy Supporters's post 26/01/2026

ಇಂದು ಬೆಂಗಳೂರು ವಕೀಲರ ಸಂಘದ ವತಿಯಿಂದ #ಮೇಯೋಹಾಲ್ ಯೂನಿಟ್ ನಲ್ಲಿ #ಗಣರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ 13ನೇ ಹೆಚ್ಚುವರಿ ಸಿಟಿ ಸಿವಿಲ್ ಹಾಗೂ ಸೆಷನ್ಸ್ ನ್ಯಾಯಾಧೀಶರಾದ ಶ್ರೀ ಓಂಕಾರಪ್ಪ ಆರ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಮಯದಲ್ಲಿ ಬೆಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರವೀಣ್ ಗೌಡ, ಉಪಾಧ್ಯಕ್ಷರಾದ ಶ್ರೀ ಗಿರೀಶ್ ಕುಮಾರ್, ಖಜಾಂಚಿಗಳಾದ ಶ್ರೀಮತಿ ಶ್ವೇತಾ ರವಿಶಂಕರ್, ಮೇಯೋಹಾಲ್ ವಿಭಾಗದ ಉಪಾಧ್ಯಕ್ಷರಾದ ಶ್ರೀ ನಟೇಶ್, ಜಂಟಿ ಕಾರ್ಯದರ್ಶಿಗಳಾದ ಶ್ರೀಮತಿ ರವಿಲಾ, ಮೆಂಬರ್ಸ್ ವೆಲ್ಫೇರ್ ಕಮಿಟಿ ಅಧ್ಯಕ್ಷರಾದ ಶ್ರೀ ಗುಣಶೇಖರ್, ಲಾ ರಿಸರ್ಚ್ ಕಮಿಟಿ ಅಧ್ಯಕ್ಷರಾದ ಶ್ರೀ ಉದಿತಾ ರಮೇಶ್, ಶಿಸ್ತು ಸಮಿತಿ ಅಧ್ಯಕ್ಷರಾದ ಶ್ರೀ ಹಿತೇಶ್ ಕುಮಾರ್ ಜೈನ್, ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಮೋಹನ್, ಶ್ರೀ ಭಕ್ತವತ್ಸಲ ಹಾಗೂ ಎಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯರು ಮತ್ತು ವಕೀಲ ಮಿತ್ರರು ಉಪಸ್ಥಿತರಿದ್ದರು.

ವಿವೇಕ್ ಸುಬ್ಬಾರೆಡ್ಡಿ
ಅಧ್ಯಕ್ಷರು - ಬೆಂಗಳೂರು ವಕೀಲರ ಸಂಘ
ಹಿರಿಯ ವಕೀಲರು - ಉಚ್ಚನ್ಯಾಯಾಲಯ, ಕರ್ನಾಟಕ

Photos from Vivek S***a Reddy Supporters's post 17/01/2026

ಇಂದು ಶಿಡ್ಲಘಟ್ಟ ತಾಲ್ಲೂಕಿನ ನಮ್ಮ ಗ್ರಾಮವಾದ ಕೊತ್ನೂರಿಗೆ ಭೇಟಿ ನೀಡಿ ಅಲ್ಲಿ ನೆರವೇರುತ್ತಿರುವ ಶ್ರೀ ಚೆನ್ನಕೇಶವ ಸ್ವಾಮಿ ದೇವಾಲಯದ ನಿರ್ಮಾಣ ಕಾರ್ಯವನ್ನು ಪರಿಶೀಲಿಸಲಾಯಿತು. ಈ ಸಮಯದಲ್ಲಿ ನನ್ನ ಸಹೋದರ ಸಹೋದರಿಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವಿವೇಕ್ ಸುಬ್ಬಾರೆಡ್ಡಿ
ಅಧ್ಯಕ್ಷರು - ಬೆಂಗಳೂರು ವಕೀಲರ ಸಂಘ
ಹಿರಿಯ ವಕೀಲರು - ಉಚ್ಚ ನ್ಯಾಯಾಲಯ, ಕರ್ನಾಟಕ

Want your public figure to be the top-listed Public Figure in Bangalore?
Click here to claim your Sponsored Listing.

Category

Website

Address


Bangalore