Jayakeerthy JAIN

Jayakeerthy JAIN

Share

Contact information, map and directions, contact form, opening hours, services, ratings, photos, videos and announcements from Jayakeerthy JAIN, Vidyagiri, Dharwad.

03/09/2022

ಧಾರವಾಡದ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ, ಎಸ್ ಡಿಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಡಾ. ನ. ವಜ್ರಕುಮಾರ ಅವರು ಇಂದು ಮುಂಜಾನೆ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.

I deeply condole the death of Secretary of Dharwad Janatha Shikshana Samiti and Vice President of SDM Educational Institutions Dr. N. Vajrakumar. May his soul attain sadhgati.
His contribution to the field of education and its growth in and around North Karnataka will be remembered for ever.
May God give the strength to his family to overcome the grief.

02/09/2022

ಭಾವಪೂರ್ಣ ಶ್ರದ್ಧಾಂಜಲಿ
🌹🌹🌹🌹🌹🌹🌹
ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳು,SDM ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಡಾ.ನ.ವಜ್ರಕುಮಾರ್ ಅವರು ಇಂದು ಮುಂಜಾನೆ ಸ್ವರ್ಗಸ್ಥರಾದರೆಂದು ತಿಳಿಸಲು ಅತೀವ ವಿಷಾದವೆನಿಸುತ್ತದೆ.
ಕೊಕ್ಕರ್ಣೆ ಅರಮನೆಯ ಶ್ರೀ.ಭೋಜರಾಜಯ್ಯ ಹಾಗೂ ಕುತ್ಯಾರು ಅರಮನೆಗೆ ಸೇರಿದ ಚಂದ್ರಮತಿ ಅಮ್ಮನವರ ದ್ವಿತೀಯ ಪುತ್ರರಾಗಿ ದಿನಾಂಕ .29.5.1939ರಂದು ಉಡುಪಿ ಜಿಲ್ಲೆಯ ನಂದಿಕೂರಿನಲ್ಲಿ ಜನಿಸಿದರು.
ಉನ್ನತ ಶಿಕ್ಷಣ ಅರ್ಥಶಾಸ್ತ್ರದಲ್ಲಿ MA ಮುಗಿಸಿದ ಇವರು ಎಂಜಿಎಂ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ವೃತ್ತಿಜೀವನವನ್ನು ಆರಂಭಿಸಿದರು.1974 ರಲ್ಲಿ ಮೂಡಬಿದ್ರಿಯ ಸುಮನರೊಂದಿಗೆ ವಿವಾಹವಾದರು.
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜರ್ಷಿ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರು 1973ರಲ್ಲಿ ಧಾರವಾಡದ ಜನತಾ ಶಿಕ್ಷಣ ಸಮಿತಿ ಸಂಸ್ಥೆಯನ್ನು ವಹಿಸಿಕೊಂಡ ಬಳಿಕ ಶ್ರೀಯುತರು ತಮ್ಮ ಕ್ರಿಯಾಶೀಲತೆ ಹಾಗೂ ಕಾರ್ಯದಕ್ಷತೆಗಳಿಂದ ಜೆಎಸ್ಎಸ್ ಸಂಸ್ಥೆಯ ಕಾರ್ಯದರ್ಶಿಗಳಾಗಿ ಎಂಜಿನಿಯರಿಂಗ್,ದಂತ ಮಹಾವಿದ್ಯಾಲಯ, ವೈದ್ಯಕೀಯ ಸಂಸ್ಥೆಗಳನ್ನು ಸ್ಥಾಪಿಸಲು ಕಾರಣೀಭೂತರಾಗಿದ್ದಾರೆ.
ಅವಿರತ ಶ್ರಮದಿಂದ ಶಿಕ್ಷಣಕ್ಷೇತ್ರದಲ್ಲಿ ಕ್ರಾಂತಿಯನ್ನುಂಟು ಮಾಡಿ ಧಾರವಾಡದಲ್ಲಿ ಶಿಕ್ಷಣ ಕ್ಷೇತ್ರವನ್ನು ವಿಸ್ತರಿಸಿದ ಕೀರ್ತಿಯ ಜೊತೆಗೆ ಸಾವಿರಾರು ಕುಟುಂಬಗಳಿಗೆ ಉದ್ಯೋಗ ನೀಡಿ ಅನ್ನದಾತರಾಗಿ ಹಾಗೂ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣದಾತರಾಗಿ
ಅಜಾತಶತ್ರುಗಳೆನಿಸಿಕೊಂಡಿದ್ದರು.
ಶ್ರೀಯುತರು ಜೈನ ಸಮಾಜದ ಹಿರಿಯರು ಮಾರ್ಗದರ್ಶಕರೂ ಆಗಿ ಧಾರವಾಡ ಜೈನ್ ಮಿಲನ್, ಧಾರವಾಡ ಇದರ ಮಹಾಪೋಷಕರು, ಸ್ಥಾಪಕರೂ ಆಗಿ ಹಲವಾರು ಧಾರ್ಮಿಕ ಕಾರ್ಯಗಳನ್ನು ಕೈಗೊಂಡು ಸಮಾಜಕ್ಕೆ ಆದರ್ಶಪ್ರಾಯರಾಗಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ. ದುಃಖತಪ್ತ ಕುಟುಂಬ ವರ್ಗ ಹಾಗೂ ಅಪಾರ ಬಂಧು ಮಿತ್ರರಿಗೆ ದುಃಖವನ್ನು ಬರಿಸುವ ಶಕ್ತಿಯನ್ನು ನೀಡಲಿ ಎಂದು ದೇವರಲ್ಲಿ ಪ್ರಾರ್ಥನೆ.
ವಿ. ಸೂ : ಸಾರ್ವಜನಿಕರಿಗೆ ಅಂತಿಮದರ್ಶನಕ್ಕಾಗಿ ಇಂದು ಮುಂಜಾನೆ 8.00 ರಿಂದ 9.30ತನಕ ಜೆಎಸ್ಎಸ್ ಸಂಸ್ಥೆಯ ಬನಶಂಕರಿ ಕಾಲೇಜು ಆವರಣದಲ್ಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಕೆ. ಜಯಕೀರ್ತಿ ಜೈನ್, ಧಾರವಾಡ.
🙏 ❤ ದಿನಾಂಕ : 02.09.2022❤🙏

13/11/2019

Send a message to learn more

Want your school to be the top-listed School/college in Dharwad?
Click here to claim your Sponsored Listing.

Address


Vidyagiri
Dharwad
580004

Opening Hours

9am - 5pm